ಪದವೀಧರ ಶಿಕ್ಷಕರ ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆ ಸಹ ಹಸಿರು ನಿಶಾನೆ ತೋರಿದ್ದು, ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (ಟಿಇಟಿ) ಪಾಸು ಮಾಡಿ, ಉದ್ಯೋಗಕ್ಕಾಗಿ ಕಾಯುತ್ತಿರುವ ಶಿಕ್ಷಕರಿಗೆ ಸರಕಾರಿ ಕೆಲಸದ ಆಸೆ ಚಿಗುರೊಡೆದಿದೆ.
ರಾಜ್ಯದ ಸರಕಾರಿ ಶಾಲೆಗಳಲ್ಲಿ ಖಾಲಿ ಉಳಿದಿರುವ ಸುಮಾರು 10,611 ಪದವೀಧರ ಶಿಕ್ಷಕರ ಹುದ್ದೆಗಳ ಭರ್ತಿಗೆ ಸರಕಾರ ಅನುಮೋದನೆ ನೀಡಿದೆ.
ಇತ್ತೀಚಿನ ಕಾಮೆಂಟ್
ಹೌ ತೋ ಅಪ್ಲೈ ,ವೇರ್ ತೆ ವೆಬ್ಸಿತ್ಟೇಸ್ ಅರೆ ಅವೇಲಬಲ್
ಹಿನ್ನೆಲೆಯೇನು?
ರಾಜ್ಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಸುಮಾರು 18 ಸಾವಿರ ಪದವೀಧರ ಶಿಕ್ಷಕರ ಹುದ್ದೆಗಳು ಖಾಲಿಯಿವೆ. 2017-18ನೇ ಸಾಲಿನಲ್ಲಿ ರಾಜ್ಯ ಸರಕಾರ ಒಟ್ಟು 10 ಸಾವಿರ ಪದವೀಧರ ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಂಡಿತ್ತು. ಆದರೆ, ಈ ಸಂಬಂಧ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅರ್ಹ ಅಭ್ಯರ್ಥಿಗಳು ಲಭ್ಯವಾಗದ ಕಾರಣ, ಕೇವಲ 3,389 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಸಾಧ್ಯವಾಯಿತು. ಈ ವೇಳೆ ಒಟ್ಟು 6,611 ಹುದ್ದೆಗಳು ಖಾಲಿ ಉಳಿದಿದ್ದವು.
ಇದರ ನಡುವೆ
2018ರಲ್ಲಿ ಹೆಚ್ಚುವರಿಯಾಗಿ 4 ಸಾವಿರ ಪದವೀಧರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಮತ್ತೆ ಸರಕಾರ ಅನುಮೋದನೆ ನೀಡಿತ್ತು. ಆದರೆ, ಈ ಸಂಬಂಧ ಯಾವುದೇ ಅಧಿಸೂಚನೆ ಹೊರಡಿಸದ ಕಾರಣ, ಹುದ್ದೆಗಳ ಭರ್ತಿ ಪ್ರಕ್ರಿಯೆ ನನೆಗುದಿಗೆ ಬಿದ್ದಿತ್ತು. ರಾಜ್ಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಸುಮಾರು 18 ಸಾವಿರ ಪದವೀಧರ ಶಿಕ್ಷಕರ ಹುದ್ದೆಗಳು ಖಾಲಿಯಿವೆ. 2017-18ನೇ ಸಾಲಿನಲ್ಲಿ ರಾಜ್ಯ ಸರಕಾರ ಒಟ್ಟು 10 ಸಾವಿರ ಪದವೀಧರ ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಂಡಿತ್ತು. ಆದರೆ, ಈ ಸಂಬಂಧ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅರ್ಹ ಅಭ್ಯರ್ಥಿಗಳು ಲಭ್ಯವಾಗದ ಕಾರಣ, ಕೇವಲ 3,389 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಸಾಧ್ಯವಾಯಿತು. ಈ ವೇಳೆ ಒಟ್ಟು 6,611 ಹುದ್ದೆಗಳು ಖಾಲಿ ಉಳಿದಿದ್ದವು.
ಎರಡು ಪ್ರತ್ಯೇಕ ಪರೀಕ್ಷೆ:
ಹೈದ್ರಾಬಾದ್-ಕರ್ನಾಟಕಕ್ಕೆ ಒಟ್ಟು 5 ಸಾವಿರ ಹಾಗೂ ಇತರೆ ಎಲ್ಲಾ ಜಿಲ್ಲೆಗಳಿಗೆ ಒಟ್ಟು 5,611 ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ, ಹೈದ್ರಾಬಾದ್-ಕರ್ನಾಟಕದ 6 ಜಿಲ್ಲೆಗಳಿಗೆ ಮತ್ತು ಇತರೆ ಜಿಲ್ಲೆಗಳಿಗೆ ಪ್ರತ್ಯೇಕವಾಗಿ ಎರಡು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ.
''ಈಗಾಗಲೇ ಪ್ರತಿ ಜಿಲ್ಲೆಯಲ್ಲಿ ಖಾಲಿ ಉಳಿದಿರುವ ಪದವೀಧರ ಶಿಕ್ಷಕರ ಹುದ್ದೆಗಳ ಮಾಹಿತಿ ಪಡೆಯಲಾಗುತ್ತಿದೆ. ಎಲ್ಲಾ ಮಾಹಿತಿಗಳನ್ನು ಸಂಗ್ರಹಿಸಿ ಆದಷ್ಟು ಶೀಘ್ರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುವುದು.''
ಹೈದ್ರಾಬಾದ್-ಕರ್ನಾಟಕಕ್ಕೆ ಒಟ್ಟು 5 ಸಾವಿರ ಹಾಗೂ ಇತರೆ ಎಲ್ಲಾ ಜಿಲ್ಲೆಗಳಿಗೆ ಒಟ್ಟು 5,611 ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ, ಹೈದ್ರಾಬಾದ್-ಕರ್ನಾಟಕದ 6 ಜಿಲ್ಲೆಗಳಿಗೆ ಮತ್ತು ಇತರೆ ಜಿಲ್ಲೆಗಳಿಗೆ ಪ್ರತ್ಯೇಕವಾಗಿ ಎರಡು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ.
''ಈಗಾಗಲೇ ಪ್ರತಿ ಜಿಲ್ಲೆಯಲ್ಲಿ ಖಾಲಿ ಉಳಿದಿರುವ ಪದವೀಧರ ಶಿಕ್ಷಕರ ಹುದ್ದೆಗಳ ಮಾಹಿತಿ ಪಡೆಯಲಾಗುತ್ತಿದೆ. ಎಲ್ಲಾ ಮಾಹಿತಿಗಳನ್ನು ಸಂಗ್ರಹಿಸಿ ಆದಷ್ಟು ಶೀಘ್ರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುವುದು.''
No comments:
Post a Comment